ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿ ದೇವವೃಂದ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ ಸರ್ಕಾರಿ ಜಮೀನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2018-19ನೇ ಸಾಲಿನಲ್ಲಿ ನಡೆದಿದ್ದ ಈ ಅಕ್ರಮದಲ್ಲಿ, ಸರ್ವೇ ನಂ. 313ರ ಹೆಚ್.4 ಮತ್ತು ಹೆಚ್.5 ಭಾಗದಲ್ಲಿರುವ ಸರ್ಕಾರಿ ಭೂಮಿಯನ್ನು ನಿಯಮಾನುಸಾರ ಅರ್ಜಿ ಸಲ್ಲಿಸದೇ ನೇರವಾಗಿ ಖಾತೆ ಮಾಡಲಾಗಿದೆ ಎನ್ನಲಾಗಿದೆ. ಇನ್ನೊಂದು ಕಡತದ ಸಾಗುವಳಿ ಚೀಟಿಯನ್ನು ಅಪ್ಲೋಡ್ ಮಾಡಿ ದಾಖಲೆಗಳನ್ನು ತಿರುಚಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.
ಈ ಪ್ರಕರಣದಲ್ಲಿ ನಿವೃತ್ತ ತಹಶೀಲ್ದಾರ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ನಾಲ್ವರಲ್ಲಿ ಒಬ್ಬರು ಮೃತಪಟ್ಟಿದ್ದು, ಉಳಿದ ಮೂವರು ನಿವೃತ್ತರಾಗಿದ್ದಾರೆ ಎಂದು ತಿಳಿದುಬಂದಿದೆ.
ನಿಕೇಶ್ ಪೆರೇರಾ ಮತ್ತು ಅನೀಶ್ ಪೆರೇರಾ ಎಂಬುವರಿಗೆ ಈ ಜಮೀನು ಮಂಜೂರು ಮಾಡಲಾಗಿದೆ ಎಂಬ ಆರೋಪವೂ ಇದೆ. ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
ತಹಶೀಲ್ದಾರ್ ಅಶ್ವಿನಿ ಅವರು ಈ ಕುರಿತು ದೂರು ನೀಡಿ ತನಿಖೆಗೆ ಆದೇಶ ನೀಡಿದ್ದಾರೆ.















Leave a Reply