October 18, 2024

MALNAD TV

HEART OF COFFEE CITY

ವಸತಿ ಶಾಲೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವು ಪ್ರಕರಣ : ಪ್ರಿನ್ಸಿಪಲ್ ಸೇರಿ 8 ಜನ ಅಮಾನತು

1 min read

 

ಕಡೂರು ಕುಪ್ಪಾಳು ಗ್ರಾಮದಲ್ಲಿರುವ ವಸತಿ ಶಾಲೆಯ ಆವರಣದಲ್ಲಿದ್ದ ನೇರಳೆಹಣ್ಣು ಕೀಳಲು ಹೋಗಿದ್ದ ಶಾಲಾ ಬಾಲಕ ನಿಯಂತ್ರಣ ತಪ್ಪಿ ಮರದಿಂದ ಕೆಳಗೆ ಬೀಳುವ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಸಂಬಂಧ ವಸತಿ ಶಾಲೆಯ ಪ್ರಾಂಶುಪಾಲ, ನಿಲಯಪಾಲಕ ಸೇರಿದಂತೆ ೮ಮಂದಿ ಸಿಬ್ಬಂದಿಯನ್ನು ನಿರ್ಲಕ್ಷ್ಯತನದ ಆರೋಪದ ಮೇರೆಗೆ ಅಮಾನತುಗೊಳಿಸಿ ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕರು ಆದೇಶಿಸಿದ್ದಾರೆ.

ಜಿಲ್ಲೆಯ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಆಕಾಶ್(12) ಶನಿವಾರ ಶಾಲೆ ಬಿಟ್ಟ ನಂತರ ತನ್ನ ಇಬ್ಬರು ಸಹಪಾಠಿಗಳೊಂದಿಗೆ ವಸತಿ ಶಾಲೆ ಆವರಣದಲ್ಲೇ ಇದ್ದ ನೇರಳೆ ಹಣ್ಣಿನ ಮರ ಏರಿ ಹಣ್ಣು ಕೀಳಲು ಮುಂದಾಗಿದ್ದ. ಮರದಲ್ಲಿ ಹಣ್ಣು ಕೀಳುತ್ತಿದ್ದ ವೇಳೆ ಬಾಲಕ ಆಕಾಶ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಮರದಿಂದ ಬೀಳುತ್ತಿದ್ದ ಸಂದರ್ಭದಲ್ಲಿ ಮರದ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ತಂತಿಯನ್ನು ಬಾಲಕ ಹಿಡಿದುಕೊಂಡಿದ್ದಾನೆ. ಈ ವೇಳೆ ಬಾಲಕನಿಗೆ ವಿದ್ಯುತ್ ಪ್ರವಹಿಸಿ ನಿತ್ರಾಣಗೊಂಡಿದ್ದ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದಗೇ ಬಾಲಕ ಮೃತಪಟ್ಟಿದ್ದ.
ಬಾಲಕನ ಸಾವಿಗೆ ವಸತಿ ಶಾಲೆಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಬಾಲಕನ ಸಂಬಂಧಿಕರು ಆರೋಪಿಸಿದ್ದ ಹಿನ್ನೆಲೆಯಲ್ಲಿ ಕ್ರೈಸ್ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರವೀಣ್ ಬಿ ಬಾಗೇವಾಡಿ ಅವರು ಕುಪ್ಪಾಳು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಧನರಾಜ್ (ಇನ್ ಚಾರ್ಜ್) ನಿಲಯಪಾಲಕಿ ಗೀತಾಂಜಲಿ , ಶಿಕ್ಷಕರಾದ ಗಾಯತ್ರಿ, ಶಿವರಾಜ್ ನಾಯ್ಕ, ಕಾವ್ಯ, ಸುರೇಶ್, ವಿಶಾಲಾಕ್ಷಿ ಬಿಂದು ಸೇರಿದಂತೆ ೮ ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!