ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Spread the love

 

ಮೂಡಿಗೆರೆ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಅತ್ಯಂತ ಪ್ರಮುಖ ರಸ್ತೆಯಾದ ಚಾರ್ಮಾಡಿ ಘಾಟಿಯಲ್ಲಿ ಕಲ್ಲುಗಳು ಜರಿಯಲಾರಂಭಿಸಿದ್ದು, ಮುಂಗಾರು ಮಳೆಯ ಆರಂಭದಲ್ಲೇ ವಾಹನ ಸವಾರರಲ್ಲಿ ಭೀತಿ ಮೂಡಿಸಿದೆ.

​ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಸಮೀಪವಿರುವ ಎತ್ತರದ ಗುಡ್ಡದಿಂದ ರಸ್ತೆ ಪಕ್ಕಕ್ಕೆ ಸಣ್ಣ ಪ್ರಮಾಣದಲ್ಲಿ ಕಲ್ಲುಗಳು ಕುಸಿದು ಬಿದ್ದಿವೆ. ಕಳೆದ ಒಂದು ತಿಂಗಳಿನಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮುಂಗಾರು ಪೂರ್ವ ಮಳೆ ಸುರಿದಿದ್ದರಿಂದ, ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಲ್ಲುಗಳು ಜರಿದ ಸಮಯದಲ್ಲಿ ಯಾವುದೇ ವಾಹನಗಳು ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದ್ದು, ಸದ್ಯ ವಾಹನ ಸಂಚಾರ ಎಂದಿನಂತೆ ಮುಂದುವರಿದಿದೆ.

​ಈಗಷ್ಟೇ ಮುಂಗಾರು ಮಳೆಗಾಲ ಶುರುವಾಗಿದ್ದು, ಮುಂದಿನ ಮೂರು ತಿಂಗಳುಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಚಾರ್ಮಾಡಿ ಘಾಟ್ ಒಳಗೊಂಡಂತೆ ಮಲೆನಾಡಿನ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಆತಂಕ ದಟ್ಟವಾಗಿದೆ.

Leave a Reply

Your email address will not be published. Required fields are marked *