September 8, 2024

MALNAD TV

HEART OF COFFEE CITY

ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾಗಿ ಎಸ್ಎಲ್ ಭೋಜೇಗೌಡ ನಾಮಪತ್ರ ಸಲ್ಲಿಕೆ

1 min read

 

ಮೈತ್ರಿಯೇ ಮುರಿದು ಬೀಳುವ ಗುಮಾನಿ ನಡುವೆ ಬಿಜೆಪಿ ಸಹಕಾರದೊಂದಿಗೆ ಜೆಡಿಎಸ್ ಅಭ್ಯರ್ಥಿ ಎಸ್ಎಲ್ ಭೋಜೇಗೌಡ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದು ಪ್ರಾದೇಶಿಕ ಆಯುಕ್ತರ ಕಚೇರಿ ಮೈಸೂರಲ್ಲಿ ಇಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯ ಮೂವರು ಬಿಜೆಪಿ ಮಾಜಿ ಶಾಸಕರು ಭೋಜೇಗೌಡ ಉಮೇದುವಾರಿಕೆ ಸಲ್ಲಿಕೆ ವೇಳೆ ಹಾಜರಿದ್ದರು.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಬೆನ್ನಲ್ಲೇ ಬಿಜೆಪಿ ಜೆಡಿಎಸ್ ಮೈತ್ರಿ ಅಂತ್ಯಗೊಳ್ಳಲಿದೆ ಎಂಬ ಮಾತು ಕೇಳಿ ಬಂದು ನಂತರ ಎಲ್ಲವು ಸರಿಯಾಗಿ ಕ್ಷೇತ್ರ ಹಂಚಿಕೆ ಲೆಕ್ಕಾಚಾರ ಸಹಾ ಮುಗಿದು ಕಳೆದ ರಾತ್ರಿ ಎಚ್.ಡಿ ದೇವೇಗೌಡರ ಮನೆಯಲ್ಲಿ ಮಾತುಕತೆ ನಂತರ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಬೆಂಬಲಿತ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಸ್ಎಲ್ ಭೋಜೇಗೌಡ ನಾಮಪತ್ರ ಇಂದು ಸಲ್ಲಿಸಿದ್ದಾರೆ. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ದಾಖಲಿಸಿದ ಅವರು ಅಧಿಕೃತವಾಗಿ ಚುನಾವಣ ಕಣಕ್ಕೆ ಧುಮುಕಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ವತಿಯಿಂದ ಕಲ್ಮರಡಪ್ಪ ತಾವು ಕೂಡ ಆಕಾಂಕ್ಷಿ ಎಂದು ಹೇಳಿದ್ದರು. ಈ ನಡುವೆ ಜಿಲ್ಲೆಯ ಮೂವರು ಬಿಜೆಪಿ ಶಾಸಕರಾದ ಜೀವರಾಜ್, ಸುರೇಶ್ ಬೆಳ್ಳಿ ಪ್ರಕಾಶ್ ಅಲ್ಲದೇ ಬಿಜೆಪಿ ಜಿಲ್ಲಾಧ್ಯಕ್ಷ ಎಂಆರ್ ದೇವರಾಜ್ ಶೆಟ್ಟಿ ಭೋಜೇಗೌಡ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಮತ್ತೊಂದು ಚುನಾವಣಾ ಅಖಾಡ ತಯಾರಾಗಿದ್ದು ಕಾಂಗ್ರೆಸ್ ನ ಕೆ.ಕೆ ಮಂಜುನಾಥ್ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಭೋಜೇಗೌಡ ನಡುವೆ ಪೈಪೋಟಿ ನಡೆಯಲಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!