🏠 Home ದೇಶ ಜಿಲ್ಲಾ ಸುದ್ದಿ ತಾಲ್ಲೂಕು ರಾಜ್ಯ ರಾಜಕೀಯ  ಆರೋಗ್ಯ  ಕ್ರೈಮ್  ಪ್ರವಾಸ ಶಿಕ್ಷಣ

 

Breaking News
---Advertisement---
 

ಶೃಂಗೇರಿ ಕ್ಷೇತ್ರ ಸ್ತಬ್ಧ: ಕಾಡಾನೆ ಹಾವಳಿ ಹಾಗೂ ಲಾಠಿಚಾರ್ಜ್ ಖಂಡಿಸಿ ಇಂದು ಬಂದ್

---Advertisement---

 

ಚಿಕ್ಕಮಗಳೂರು: ಬಲಿಯಾದ ಪ್ರಕರಣ ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಲಾಠಿಚಾರ್ಜ್ ಖಂಡಿಸಿ ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ.
​ಕಾಫಿನಾಡಿನ ಶೃಂಗೇರಿ, ಎನ್.ಆರ್. ಪುರ, ಕೊಪ್ಪ ತಾಲೂಕುಗಳು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬಂದ್‌ಗೆ ಕರೆ ನೀಡಲಾಗಿದೆ. ಈ ಹೋರಾಟಕ್ಕೆ ರೈತ ಸಂಘಟನೆಗಳು, ನಾಗರಿಕ ಹಿತರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋ ಚಾಲಕರು ಹಾಗೂ ಬಿಜೆಪಿ ಬೆಂಬಲ ಸೂಚಿಸಿವೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ-ವಹಿವಾಟುಗಳು ಸ್ಥಗಿತಗೊಂಡಿದ್ದು, ಬೆಳಿಗ್ಗೆ 11 ಗಂಟೆಗೆ ಬಾಳೆಹೊನ್ನೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಸರ್ಕಾರದ ವಿರುದ್ಧ ಜನಾಕ್ರೋಶ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಿದೆ.

Join WhatsApp

Join Now

Join Telegram

Join Now

Leave a Comment