October 18, 2024

MALNAD TV

HEART OF COFFEE CITY

ಕೆರೆ ಒತ್ತುವರಿ ಭಯಕ್ಕೆ ಚಿಕ್ಕಮಗಳೂರಲ್ಲಿ ಆತ್ಮಹತ್ಯೆ ಶಂಕೆ…?

1 min read

ಕೆರೆ ಒತ್ತುವರಿಯ ಭಯದ ಭೂತಕ್ಕೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಮೃತನನ್ನ ಚಿಕ್ಕಮಗಳೂರು ತಾಲೂಕಿನ ಕೆ.ಆರ್.ಪೇಟೆ ಸಮೀದ ಕೆಂಚೇನಹಳ್ಳಿ ಗ್ರಾಮದ 38 ವರ್ಷದ ಮಲ್ಲೇಶ್ ಎಂದು ಗುರುತಿಸಲಾಗಿದೆ. ಮೃತ ಮಲ್ಲೇಶ್ ಲಕ್ಷಗಟ್ಟಲೇ ಸಾಲ ಮಾಡಿಕೊಂಡಿದ್ದು ಸಾಲದ ಭಯಕ್ಕೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ, ಕೆಂಚೇನಹಳ್ಳಿ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸಾಲದ ಜೊತೆ ಒತ್ತುವರಿ ಭಯಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದಿದ್ದಾರೆ. ಮೃತ ಮಲ್ಲೇಶ್ ಗ್ರಾಮದ ಕೆರೆ ಪಕ್ಕ 14 ಗುಂಟೆ ಒತ್ತುವರಿ ಮಾಡಿದ್ದರು ಎಂದು ಹೇಳಲಾಗಿದೆ. ಒತ್ತುವರಿ ಸಂಬಂಧ ಕಂದಾಯ ಅಧಿಕಾರಿಗಳು ನೋಟೀಸ್ ಕೂಡ ನೀಡಿದ್ದರು. ಗ್ರಾಮದ ಅಕ್ಕಪಕ್ಕದವರಿಗೂ ನೋಟೀಸ್ ನೀಡಿದ್ದರು. ಕೆಲವರ ಒತ್ತುವರಿ ತೆರವಿಗೂ ಅಧಿಕಾರಿಗಳು ಮುಂದಾಗಿದ್ದರು. ನನಗೂ ನೋಟೀಸ್ ನೀಡಿದ್ದಾರೆ. ನನ್ನ ಜಮೀನನ್ನು ತೆರವು ಮಾಡ್ತಾರೆ. ಸಾಲ ತೀರಿಸೋದು ಹೇಗೆ. ಕಾಫಿ ಗಿಡ ಹಾಗೂ ಮೆಣಸಿನ ಬಳ್ಳಿಗಳು ನಾಶವಾಗುತ್ತವೆ ಎಂದು ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಲ್ಲೇಶ್ ತನ್ನ ಸಕ್ರಮ ಜಮೀನಿನ ಜೊತೆ ಒತ್ತುವರಿ ಮಾಡಿ ಕಾಫಿ-ಮೆಣಸು ಬೆಳೆದಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು ನೋಟೀಸ್ ನೀಡುತ್ತಿದ್ದಂತೆ ಭಯಗೊಂಡು ಕಾಫಿಗೆ ಸಿಂಪಡಿಸಲು ತಂದಿದ್ದ ಕಳೆನಾಶಕವನ್ನೇ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳ ಹಿಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಲ್ಲೇಶ್ 2 ದಿನಗಳಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!