September 8, 2024

MALNAD TV

HEART OF COFFEE CITY

ಸಿಡಿದೇಳದಿದ್ರೆ ನಮಗೂ ಕುರಿಗಳಿಗೂ ವ್ಯತ್ಯಾಸವಿಲ್ಲ : ಕೈ ರೆಬಲ್ ಅಭ್ಯರ್ಥಿ ದಿನೇಶ್

1 min read

ಸಿಡಿದೇಳದಿದ್ರೆ ನಮಗೂ ಕುರಿಗಳಿಗೂ ವ್ಯತ್ಯಾಸವೇ ಇಲ್ಲ ಎಂದು ನೈರುತ್ಯ ಪದವೀಧರರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ರೆಬಲ್ ಅಭ್ಯರ್ಥಿ ಎಸ್.ಪಿ ದಿನೇಶ್ ಹೇಳಿದ್ದಾರೆ. ಆಯನೂರು ಮಂಜುನಾಥ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಅವರು ಮುಂದೆಯೂ ಅವರು ಕೈ ಪಕ್ಷದಲ್ಲಿ ಉಳಿಯುವುದಿಲ್ಲ ಎಂದಿದ್ದಾರೆ. ‌

ಮನಸೋ ಇಚ್ಛೆ ಪದೇ ಪದೇ ಪಕ್ಷ ಬದಲಿಸುವ ಪಕ್ಷಾಂತರಿಗೆ ಕಾಂಗ್ರೆಸ್ ನೈರುತ್ಯ ಪದವೀಧರ ಕ್ಷೇತ್ರದಿಂದ ಟಿಕೆಟ್ ನೀಡಿರುವುದು ಬೇಸರ ತಂದಿದೆ ಪಕ್ಷದ ಮುಖಂಡರು ನನ್ನ ಮನವೊಲಿಕೆಗೆ ಯತ್ನಿಸುತ್ತಿದ್ದಾರೆ ಆದರೂ ಸ್ಪರ್ಧೆ ಖಚಿತ ಎಂದು ರೆಬಲ್ ಅಭ್ಯರ್ಥಿ ಎಸ್.ಪಿ ದಿನೇಶ್ ಖಡಕ್ ಆಗಿ ಹೇಳಿದ್ದಾರೆ. ಚಿಕ್ಕಮಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಯನೂರು ಮಂಜುನಾಥ್ ವಿರುದ್ಧ ಹೆಸರು ಹೇಳದೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ ಎಂದು ನಾನು ಮೊದಲೇ ಹೇಳಿದ್ದೆ ಆದರೆ ಏಕೆ ಸೇರಿಕೊಂಡರು ಎಂಬುದು ಯಕ್ಷಪ್ರಶ್ನೆ ಎಂದ ಅವರು ಯಾವುದೇ ಕಾರಣಕ್ಕೂ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಮೇ 16 ರ ಗುರುವಾರ ನಾಮ ಪತ್ರ ಸಲ್ಲಿಸುವುದಾಗಿ ಎಸ್.ಪಿ ದಿನೇಶ್ ಹೇಳಿದರು. ಕಾಂಗ್ರೆಸ್ ಪಕ್ಷ ಉಚ್ಚಾಟನೆ ಮಾಡಿದರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಅದಕ್ಕೂ ಮೊದಲು ನಾನೇ ಪಕ್ಷ ಬಿಡುವ ಯೋಚನೆ ಮಾಡಿದ್ದೇನೆ ಎಂದರು. ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ತಮಗೆ ಶಿಫಾರಸ್ಸು ಪತ್ರ ನೀಡಿದ್ದರು ಅವರಿಗೆ ನಾನು ಋಣಿ ಎಂದು ಸ್ಮರಿಸಿದ ಅವರು ನೈರುತ್ಯ ಕ್ಷೇತ್ರದ ಪದವೀಧರ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸಿದ್ದೇನೆ ನನ್ನ ಗೆಲುವು ಖಚಿತ ಎಂದು ದಿನೇಶ್ ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!