ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಅತ್ಯುನ್ನತ ಸೇವೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ನೀಡಲಾಗುವ 2025ನೇ ಸಾಲಿನ ಪ್ರತಿಷ್ಠಿತ “ಮುಖ್ಯಮಂತ್ರಿ ಪದಕ”ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಇಬ್ಬರು ಪೊಲೀಸರು ಆಯ್ಕೆಯಾಗುವ ಮೂಲಕ ಕಾಫಿನಾಡಿಗೆ ಹೆಮ್ಮೆ ತಂದಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶೈಲಕುಮಾರ್ ಜೆ. ಮತ್ತು ಜಿಲ್ಲಾ ಸಿಆರ್ಇ ಪೊಲೀಸ್ ಠಾಣೆಯ ಸಿ.ಹೆಚ್.ಸಿ. ಆಗಿ ಸೇವೆ ಸಲ್ಲಿಸುತ್ತಿರುವ ಗಿರೀಶ್ ಟಿ. ಎಸ್. ಅವರು ಈ ಗೌರವಕ್ಕೆ ಪಾತ್ರರಾದ ಸಾಧಕರಾಗಿದ್ದಾರೆ.
ಸಾರ್ವಜನಿಕ ಸೇವೆ, ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಹಾಗೂ ಇಲಾಖೆಯಲ್ಲಿ ತೋರಿದ ಅಪ್ರತಿಮ ಕರ್ತವ್ಯನಿಷ್ಠೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಇವರ ಹೆಸರನ್ನು ಈ ಪ್ರಶಸ್ತಿಗೆ ಅಂತಿಮಗೊಳಿಸಿದೆ. ಈ ಸಾಧನೆಯು ಜಿಲ್ಲಾ ಪೊಲೀಸ್ ಇಲಾಖೆಯ ಘನತೆಯನ್ನು ಹೆಚ್ಚಿಸಿದ್ದು, ಸಹೋದ್ಯೋಗಿಗಳು ಮತ್ತು ಹಿರಿಯ ಅಧಿಕಾರಿಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪದಕ ವಿಜೇತ ಈ ಇಬ್ಬರು ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಏಪ್ರಿಲ್ 2 ರಂದು ವೈಭವವಾಗಿ ನಡೆಯಲಿರುವ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ ಪದಕ ನೀಡಿ ಸನ್ಮಾನಿಸಲಾಗುವುದು.














Leave a Reply